ರಾಜ್ಯ ಸುದ್ದಿ-ಬೆಂಗಳೂರು
ಕರ್ನಾಟಕ ರಾಜ್ಯದ ಜಿದ್ದಾಜಿದ್ದಿನ ಫಲಿತಾಂಶ ಹೊರ ಬಂದ ಹಿನ್ನೆಲೆ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಯಾ ಕ್ಷೇತ್ರದ ಜನರು ನೀಡಿರುವ ತೀರ್ಪನ್ನು ನಾನು ಗೌರವಿಸಿ ಸ್ವಾಗತಿಸಿದ್ದೇನೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮುಖಂಡ ಸಿದ್ದರಾಮಯ್ಯನವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಪ್ರಜಾಪ್ರಭುತ್ವ ಇರುವಿಕೆಯ ದೃಷ್ಟಿಯಿಂದ ನಮ್ಮ ಪಕ್ಷವನ್ನು ಬಿಟ್ಟು ಹೋಗಿ ಕುದುರೆ ವ್ಯಾಪಾರಕ್ಕೆ ಒಳಗಾದವರಿಗೆ ಕರ್ನಾಟಕದ ಜನತೆ ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆಯಲ್ಲಿ ಇದ್ದೆ ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ನೋವಿನಿಂದ ಸಿದ್ದರಾಮಯ್ಯ ಮಾತನಾಡಿದರು.
ಇಂತಹ ಜನಗಳ ಮಧ್ಯೆ ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜೆಗಳ ಹಿತವನ್ನು ಕಾಪಾಡಬೇಕೆಂದು ಮಾಡಿದ್ದೆ.ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ರಾಜೀನಾಮನೆ ನೀಡಿದ್ದೇನೆ.
ರಾಜೀನಾಮೆಯ ಒಂದು ಪ್ರತಿಯನ್ನು ಎಐಸಿಸಿಗೆ ಹಾಗೂ ಕೆಪಿಸಿಸಿಗೆ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿವೇಣುಗೋಪಾಲ್ ಅವರಿಗೆ ಈಗಾಗಲೇ ಸಲ್ಲಿಸಿದ್ದೇನೆ ಎಂದು ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹೇಳಿದರು.

Published by Royal TV
Royal tv Kannada news online website channel
View more posts