ಬೆಂಕಿ ತಗುಲಿ ಕಬ್ಬು ಬೆಳೆ ನಾಶ

ಅಥಣಿ ತಾಲೂಕಿನ ವರದಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಅಪಾರ ಕಬ್ಬು ಬೆಳೆ ನಾಶವಾಗಿದೆ.

ಚಂದ್ರಕಲಾ ವಿಠ್ಠಲ ಮಾಚಕನೂರ ಎಂಬುವರಿಗೆ ಸೇರಿದ ಜಮೀನಿನ ರಿ.ಸ.ನಂ-98/4 ನಾಲ್ಕು ಎಕರೆ ಕಬ್ಬು ಬೆಂಕಿಗಾಹುತಿಯಾಗಿ ಸುಮಾರು 6 (ಆರು) ಲಕ್ಷ ರೂಪಾಯಿ ಹಾನಿ ಸಂಬವಿಸಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿ ಅಶೋಕ ಕೋಗಿಲೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿ ತಾಲೂಕಾ ದಂಡಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ.

ಅಥಣಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ:ಸಚೀನ ಕಾಂಬಳೆ

Published by Royal TV

Royal tv Kannada news online website channel

Leave a comment

Design a site like this with WordPress.com
Get started