ಧರ್ಮಸ್ಥಳ ಸಂಸ್ಥೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ಅಡಿಯಲ್ಲಿ ಆಯುಷ್ಮಾನ ಕಾರ್ಡ ವಿತರಣೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಗ್ರಾಮೀಣ ಹೆಣ್ಣು ಮಕ್ಕಳಿಗೆ ಆರೋಗ್ಯದ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರದ ಯೋಜನೆಯಲ್ಲಿ ಒಂದಾದ ಆಯುಷ್ಮಾನ ಕಾರ್ಡ್ ಗಳನ್ನು ಸಂಘದ ಮಹಿಳಾ ಸದಸ್ಯರಿಗೆ ಉಚಿತವಾಗಿ ನೀಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಉದ್ಘಾಟನೆ ನೇರವೆರಿಸಿದ ತಾಲೂಕ ಪಂಚಾಯತ್ ಉಪಾದ್ಯಕ್ಷ ಮಂಜುನಾಥಗೌಡ ಪಾಟೀಲ ಧರ್ಮಸ್ಥಳ ಸಂಸ್ಥೆಯು ಸಮಾಜದ ಕೊನೆಯ ಪ್ರಜೆಗೂ ಮುಟ್ಟುವಂತ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ದಾರಿದೀಪವಾಗಿದೆ. ಇದು ತಾಲೂಕಿನ ಎಲ್ಲಾ ಸಾರ್ವಜನಿಕರು ಕೇಂದ್ರ ಸರ್ಕಾರದ ಯೋಜನೆಯನ್ನು ಉಪಯೋಗಿಸಿ ಕೊಳ್ಳಬೇಕು. ಪ್ರತಿಯೊಬ್ಬ ರೈತನು ತನ್ನ ದುಡಿಮೆಯ ಶೇಕಡಾ 60 ರಷ್ಟು ಆರೋಗ್ಯಕ್ಕೆ ಖರ್ಚು ಮಾಡುವುದು ದುರಂತ ಎಲ್ಲರೂ ಆರೋಗ್ಯದ ಕಡೆ ಗಮನ ಹರಿಸಿದರೆ ಒಳ್ಳೆಯದು ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಗವಹಿಸಿ ಮಾತನಾಡಿದ ಸಂಸ್ಥೆಯ ತಾಲೂಕಿನ ಅದಿಕಾರಿಗಳಾದ ಶ್ರೀ ಹೊನ್ನಪ್ಪ ಧರ್ಮಸ್ಥಳ ಸಂಸ್ಥೆಯ ಮುಖ್ಯ ಉದ್ದೇಶವೇ ಗ್ರಾಮೀಣ ಬಾಗದ ಜನರ ಮೂಲಭೂತವಾಗಿ ಬದುಕುವದು. ಅದರ ಹಿತ ದೃಷ್ಟಿಯಿಂದ ಎಲ್ಲರೂ ಸಂಸ್ಥೆಯ ಜೊತೆ ಕೈಜೋಡಿಸಿ ತಮ್ಮ ಬದುಕನ್ನು ಬಂಗಾರವಾಗಿಸಲು ಪ್ರಯತ್ನಿಸೋಣ ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಶ್ರೀ ಎಸ್ ಎಸ್ ಮೇಟಿ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಸುಧಾ ಬಸರಕೋಡದ ಸಂಸ್ಥೆಯ ವತಿಯಿಂದ ಸದಸ್ಯರಿಗೆ 140 ಜನರಿಗೆ ಉಚಿತವಾಗಿ ಕಾರ್ಯಗಳನ್ನು ನೀಡುವುದು ಹಾಗೆ ಯಾರೂ ಬೇಕಾದರೂ ಆಯುಷ್ಮಾನ ಕಾರ್ಡ್ ಗಳನ್ನು ಆದಷ್ಟೂ ಬೇಗ ಮಾಡಿಸಿ ಕೊಂಡರೆ ಒಳ್ಳೆಯದು ಎಂದು ಹೇಳಿದರು

ಕಾರ್ಯಕ್ರಮದ ಸಮಾರೊಪವನ್ನು ಜನವರಿ 10 ಕ್ಕೆ ಪವಾಡ ಬಸವೇಶ್ವರ ದೇವಾಲಯದ ಆವರಣದಲ್ಲಿ ನೆರವೇರಿಸಲಾಗವದು ಎಂದು ಹೇಳಿದರು.

ವರದಿ ಸಾಗರ ಉಕ್ಕಲಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started