ತಾನು ಕಲಿತ ಶಾಲೆಯ ದುರಸ್ತಿಗೆ ಮುಂದಾದ ಗ್ರಾಮ ಪಂಚಾಯತ ಸದಸ್ಯ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಾನು ಕಲಿತ ತಮ್ಮೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಬಗ್ಗೆ ಶಿಕ್ಷಕರ ಜೋತೆಗೆ ಚರ್ಚೆ ಮಾಡಿದ ಗ್ರಾಮ ಪಂಚಾಯತ ಸದಸ್ಯ ಶ್ರೀಶೈಲ ಹೂಗಾರ.

ಬಿಸಿ ಊಟ,ನೀರಿನ ಸಮಸ್ಯೆ ಬಗ್ಗೆ ಕೇಳಲಾಯಿತು, ಶಾಲೆಯ ಎರಡೂ ರೋಮಿನ ಮೇಲ್ಚಾವಣಿಗಳು ಬಿದ್ದು ಹೋಗಿದ್ದು ವಿದ್ಯಾರ್ಥಿಗಳಿಗೆ ಬಹಳ ಸಮಸ್ಯೆಯಾಗುತ್ತಿದೆ.ಮಳೆಗಾಲದಲ್ಲಿ ನೀರು ಶಾಲೆಯ ರೋಮಿನಲ್ಲಿ ಬಿದ್ದು ನಿಲ್ಲುತ್ತದೆ.ಬೇಸಿಗೆ ಕಾಲದಲ್ಲಿ ಬಿಸಿಲು ಜಾಸ್ತಿ ಇರುವುದರಿಂದ ಮಕ್ಕಳಿಗೆ ತುಂಬಾ ಸಮಸ್ಯೆಯಾಗುತ್ತಿದೆ ಎಂದು ಹೇಳಿದರು.

ನೀರಿನ ಸಮಸ್ಯೆ ಎನು ಇಲ್ಲಾ ಎಂದು ಹೇಳಿದರು,ಕೊಠಡಿಗಳ ದುರಸ್ತಿ ಬಗ್ಗೆ ಮೆಲಾಧಿಕಾರಿಗಳಿಗೆ ಹಾಗೂ ಮಾನ್ಯ ಶಾಸಕರ ಮತ್ತು ಜಿಲ್ಲಾ ಪಂಚಾಯತ ಉಪಾಧ್ಯಕ್ಷರ ಗಮನಕ್ಕೆ ತಂದು ಆದಷ್ಟು ಬೇಗನೆ ದುರಸ್ತಿ ಮಾಡಲು ಎನೂ ಅನುಕೂಲ ಬೇಕು ಅದನ್ನು ಸಿದ್ದ ಮಾಡಿಕೊಳ್ಳುತ್ತೇನೆ ಎಂದು ಭರವಸೆ ನೀಡಿದ್ದೇವೆ.ನಮ್ಮ ಗ್ರಾಮ ಪಂಚಾಯತಿ ವತಿಯಿಂದ ಎನೂ ಸಹಾಯ ಬೇಕಾಗುತ್ತದೆ ಅದನ್ನು ಮಾಡಿಸಿ ಕೊಡಲಾಗುವುದು ಎಂದು ಹೇಳಿದ್ದು ಇದಕ್ಕೆ ತಾಲ್ಲೂಕು ಪಂಚಾಯತ ಉಪಾಧ್ಯಕ್ಷ ಮಂಜುನಾಥಗೌಡ ಪಾಟೀಲ ಅವರ ಗಮನಕ್ಕೆ ತಂದಿದ್ದೇನೆ ಅವರು ಕೂಡ ಈ ಸಮಸ್ಯೆಗೆ ಅನುದಾನ ನೀಡುವುದಾಗಿ ಹೇಳಿದ್ದಾರೆ. ಎಂದು ಶ್ರೀಶೈಲ ಹೂಗಾರ ಗ್ರಾಮ ಪಂಚಾಯತಿ ಸದಸ್ಯ ಸರೂರ ಹೇಳಿದರು.

ರಾಯಲ್ ಟಿವಿ ನ್ಯೂಸ್ ವಿಜಯಪುರ

Published by Royal TV

Royal tv Kannada news online website channel

Leave a comment

Design a site like this with WordPress.com
Get started