ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಉಚಿತ ಡಸ್ಟ್ ಬಿನ್ ವಿತರಣೆ ಕಾರ್ಯಕ್ರಮ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡ ಶ್ರದ್ದಾ ಕಾರ್ಯಕ್ರಮದಲ್ಲಿ ಇಂದು ವಿಧ್ಯಾನಗರದಲ್ಲಿ ಉಚಿತವಾಗಿ ಸಂಸ್ಥೆಯ ವತಿಯಿಂದ ಡಸ್ಟಬಿನ್ ವಿತರಣೆ ಮಾಡಿದರು.

ನಂತರ ಅನೇಕರು ಈ ಕಾರ್ಯಕ್ರಮದಲ್ಲಿ ಸ್ವಚ್ಚತೆಯ ಕುರಿತು ಮಾತನಾಡಿದರು. ಸಂಸ್ಥೆಯ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ಕವಿತಾ ಕೆ.ಅವರು ಸ್ವಚ್ಚತಾ ಕುರಿತು ಹಮ್ಮಿಕೊಳ್ಳಬಹುದಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಮಂಜುಳಾ,ಗೀತಾ,ಶಿರವಾಳ, ಕೆಸರಟ್ಟಿ,ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನದ ಅರ್ಚಕರಾದ ಆದಿನಾಥ, ಹಾಗೂ ಸೇವಾ ಪ್ರತಿನಿಧಿ ಇದ್ದರು.ಕಾರ್ಯಕ್ರಮದಲ್ಲಿ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ಮೊಟಗಿ ಮಾಡಿದರು.

ರಾಯಲ್ ಟಿವಿ ನ್ಯೂಸ್ ಮುದ್ದೇಬಿಹಾಳ

Published by Royal TV

Royal tv Kannada news online website channel

Leave a comment

Design a site like this with WordPress.com
Get started