ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬಿಜೆಪಿ ಪಕ್ಷದ ಮುಖಂಡರಿಂದ ಹಣ್ಣು ಹಂಪಲ ವಿತರಣೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಬಡಮಕ್ಕಳಿಗೆ ಹಾಗೂ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಜನ್ಮದಿನಾಚರಣೆ ಹಿನ್ನೆಲೆ ಸಮಾಜಸೇವಕರು ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಶ್ರೀಮತಿ ಕಾಶೀಬಾಯಿ ರಾಂಪೂರ, ಗಿರೀಶಗೌಡ ಪಾಟೀಲ ನೇತೃತ್ವದಲ್ಲಿ ಗುರುವಾರ ಬಾಳೆಹಣ್ಣು, ಬಿಸ್ಕೆಟ್ ವಿತರಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಗಿರೀಶಗೌಡ ಪಾಟೀಲ, ಬಿಜೆಪಿ ಮಹಿಳಾ ಧುರೀಣೆ, ಕಾಶಿಬಾಯಿ ರಾಂಪೂರ, ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಾಧನೆ, ಜೀವನದ ಕುರಿತು ತಿಳಿವಳಿಕೆ ನೀಡಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಪರಶುರಾಮ ಪವಾರ ,ಶ್ರೀಶೈಲ ದೊಡಮನಿ,ರಾಜು ಬಳ್ಳೊಳ್ಳಿ,ರವಿಚಂದ್ರ ಹಡಲಗೇರಿ, ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಶಿಲ್ಪಾ ಛಲವಾದಿ,ಗೌರಮ್ಮ ಹುನಗುಂದ,ನೀಲಮ್ಮ ಛಲವಾದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ರಾಯಲ್ ಟಿವಿ ನ್ಯೂಸ್ ಮುದ್ದೇಬಿಹಾಳ

Published by Royal TV

Royal tv Kannada news online website channel

Leave a comment

Design a site like this with WordPress.com
Get started