21 ದಿನಗಾಳ ಕಾಲ ದೇಶವೆ ಲಾಕ್ ಡೌನ್ ದೇಶದ ಜನತೆಯ ಪ್ರಾಣ ಕಾಪಾಡಲು ಪ್ರಧಾನಿ ಮೋದಿ ಆದೇಶ

ನವದೆಹಲಿ: ಕೊರೋನ ಸೋಂಕು ಹರಡದಂತೆ ಜಾಗೃತಿ ವಹಿಸಲು ಇನ್ನು 21 ದಿನಗಳ ಕಾಲ ಸಂಪೂರ್ಣವಾಗಿ ಭಾರತ ಲಾಕ್ ಡೌನ್ ಆಗಲಿದೆ. ಏಪ್ರಿಲ್14 ವರೆಗೆ ಭಾರತ ದೇಶಾದ್ಯಂತ ಯಾರೂ ಮನೆಯಿಂದ ಹೊರಗೆ ಬರಬೇಡಿ. 21 ದಿನ ನೀವು ಮನೆಯಲ್ಲಿರದಿದ್ದಲ್ಲಿ ನಿಮ್ಮ ಕುಟುಂಬ 21 ವರ್ಷ ಹಿಂದಕ್ಕೆ ಹೋಗಲಿದೆ -ಪ್ರಧಾನ ನರೇಂದ್ರ ಮೋದಿ ರಾಷ್ಟ್ರದ ಜನರಿಗೆ ಮಾಡಿದ ಮನವಿ ಮಾಡಿಕೊಂಡರು ಎಚ್ಚರಿಕೆಯ ಸಂದೇಶವನ್ನು ಹೇಳಿದ್ದಾರೆ.

ಭಾರತ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ಜನರಲ್ಲಿ ಕೈ ಮುುಗಿದು ಮನವಿ ಮತ್ತು ಎಚ್ಚರಿಕೆಯ ಸಂದೇಶ ನೀಡಿದರು. ನಾನು ಪ್ರಧಾನಿಯಾಗಿ ಅಲ್ಲ, ನಿಮ್ಮ ಕುಟುಂಬದಲ್ಲಿನ ಒಬ್ಬ ಸದಸ್ಯನಾಗಿ ಕೈ ಮಗಿದು ಬೇಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಈ ಕೊರೋನಾ ಸೋಂಕಿನಿಂದ ವಿಶ್ವದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಧಾನಿ, ನಿಮಗೆ ನೀವೇ ಲಕ್ಷ್ಮಣ ರೇಖೆ ಹಾಕಿಕೊಂಡು ಎಲ್ಲಿದ್ದೀರೊ ಅಲ್ಲೇ ಇರಿ. ಏನು ಮಾಡಬೇಕೆಂದಿದ್ದೀರೋ ಅಲ್ಲಿಂದಲೇ ಮಾಡಿ. ದಯಮಾಡಿ ಹೊರಗೆ ಬರಲೇ ಬೇಡಿ. ನಾನು ನಿಮಗೆ ಕೈ ಮುಗಿದು ಪ್ರಾರ್ಥಿಸುತ್ತೇನೆ. 21 ದಿನದ ನಂತರ ಎಲ್ಲವೂ ಸುಗಮವಾಗಲಿದೆ ಎಂದು ಹೇಳಿದರು.

ಕೊರೋನಾ ಯಾವ ರೀತಿಯಲ್ಲಿ ಮತ್ತು ಎಷ್ಟು ವೇಗವಾಗಿ ಹರಡುತ್ತಿದೆ ಎಂದು ವಿವರಿಸಿದ ಅವರು, ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ ಹೊಂದಿರುವ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಕೇವಲ 11 ದಿನದಲ್ಲಿ 1 ಲಕ್ಷ ಜನರಿಗೆ ಸೋಂಕು ತಗುಲಿದೆ. ನಾವು ಜಾಗ್ರತರಾಗದಿದ್ದರೆ ಇನ್ನು ಮೂರೇ ದಿನದಲ್ಲಿ ಇನ್ನೂ ಒಂದು ಲಕ್ಷ ಜನರಿಗೆ ಹರಡಲಿದೆ ಎಂದು ಎಚ್ಚರಿಸಿದರು.

ಈ ಕೊರೋನಾ ವಿರುದ್ಧ ಕಾರ್ಯಾಚರಣೆಗಾಗಿ 15 ಸಾವಿರ ಕೋಟಿ ರೂ. ಮೀಸಲಿಡುವುದಾಗಿ ನರೇಂದ್ರ ಮೋದಿ ಘೋಷಿಸಿದರು.

ಈ ಸೋಂಕು ಹರಡದಂತೆ ತಡೆಗಟ್ಟಲು ನಿಮ್ಮ ಸಹಕಾರ ಮಹತ್ವದಾಗಿದೆ ದೇಶದ ಜನತೆ ಸಹಕರಿಸಿ ಎಂದರು.

ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started