
ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಎರಡು ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್. ಹಲವು ಬಾರಿ ಸಭೆ ನಡೆಸಿ ಮನವಿ ಮಾಡಿಕೊಂಡರು ಸರ್ಕಾರದ ನಿಯಮ ಉಲ್ಲಂಘಿಸಿ ಜನ ಸೇರಿದ್ದಾರೆ ಎಂದು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಮೋಮಿನ್ ಗಲ್ಲಿಯ ಹುರೇರಾ ಮಸೀದಿ ಹಾಗೂ ಕುಂಬಾರ ಗಲ್ಲಿಯ ಮಸೀದಿಯಲ್ಲಿ ನಮಾಜ ಮಾಡಲು ಹೋಗಿದ್ದ 70 ಕ್ಕೂ ಹೆಚ್ಚು ಜನ ಸೇರಿದ್ದರು. ಮಸೀದಿ ಮೇಲೆ ಪೊಲೀಸ್ ದಾಳಿಯಿಂದ ಪ್ರಾರ್ಥನೆಗೆ ಸೇರಿದ್ದವರು ಚಲ್ಲಾಪಿಲ್ಲಿಯಾಗಿ ಓಡಿದರು.ಅವರನ್ನೆಲ್ಲ ಮಸೀದಿಯಿಂದ ಹೊರಗೆ ಕರೆದ ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದರು.
ಸರ್ಕಾರದ ನಿಯಮ ಉಲ್ಲಂಘಿಸಿದವರಿಗೆ ಯಾರೂ ಸೇರಲು ಅವಕಾಶ ಇಲ್ಲ ಎಂದು ಹೇಳಿದರು. ನಾವು ಹಲವು ಬಾರಿ ಸಭೆ ನಡೆಸಿ ನಿಯಮ ಮೀರದಂತೆ ಮನವಿ ಮಾಡಿಕೊಂಡರು ಜನರು ಈ ರೀತಿ ಗುಂಪಾಗಿ ಸೇರಿ ನಿಯಮವನ್ನು ಉಲ್ಲಂಘಿಸಿದ್ದಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದರು.
ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts