ಆಗ ತಾನೆ ಹುಟ್ಟಿದ ಹಸುಗುಸನ್ನು ಎಸೆದು ಹೋದ ಪಾಪಿ ತಾಯಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡದಲ್ಲಿ ಇಂದು ಬೆಳಗ್ಗಿನ ಜಾವ ಅಮಾನವೀಯ ಕೃತ್ಯ ನಡೆದಿರುವದು ಕಂಡು ಬಂದಿದೆ.

ಮುಗಳಖೋಡದ ಕೆನಾಲ್ ಆಫಿಸ್ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ. ಆ ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾರ್ಯಕರ್ತರು ಆರೋಗ್ಯ ಕೇಂದ್ರದ ನರ್ಸ, ಆರಕ್ಷಕ ಠಾಣೆ ಸಿಬ್ಬಂದಿ ಎ.ಎಸ್. ಐ ದುಂಡಿನಮನಿ ಬೇಟಿ ನೀಡಿ ಆ ಕಂದಮ್ಮನ ರಕ್ಷಣೆಯಲ್ಲಿ ತೊಡಗಿದ್ದಾರೆ. ಈ ಘಟನೆಯನ್ನು ಪರಿಶೀಲಿಸಿ ಮಗುವನ್ನು ಸಂಬಂಧಿಸಿದವರಿಗೆ ಹಸ್ತಾಂತರ ಮಾಡುವ ಕೆಲಸ ಮಾಡುವದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸ್ಥಳೀಯ ಜನರನ್ನು ಆ ಘಟನೆ ಬಗ್ಗೆ ಮಾಹಿತಿ ಕೇಳಿದಾಗ ಬೆಳಿಗ್ಗೆ 4-5 ಗಂಟೆ ಸುಮಾರಿಗೆ ಈ ಗಂಡು ಮಗವನ್ನು ಹಾಕಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಈ ಕಂದಮ್ಮನ ರಕ್ಷಣೆ ಆಶಾ ಕಾರ್ಯಕರ್ತೆಯರು ಹಾಗೂ ಸ್ಟಾಪ್ ನರ್ಸ ಅವರ ಹೆಗಲಮೇಲಿದೆ.

ರಾಯಲ್ ಟಿವಿ ನ್ಯೂಸ್ ಬೆಳಗಾವಿ, ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started