
ತುಮಕೂರ : ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಲಿಂಗೈಕ್ಯ ಕಲಿಯುಗ ದೇವ ಡಾ.ಶಿವಕುಮಾರ ಗದ್ದುಗೆಯ ದರ್ಶನವನ್ನು ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು.
ನಂತರ ಮಠದಲ್ಲಿ ಇರುವಂತಹ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಪಾಕಿಸ್ತಾನದಿಂದ ಸಿಖ್ಖರು, ಜೈನರು, ಪಾರ್ಸಿಗಳು ತೊಂದರೆಗೆ ಒಳಗಾಗಿ ಭಾರತಕ್ಕೆ ಬರುತ್ತಿದ್ದಾರೆ. ಅಂತವರ ರಕ್ಷಣೆಗೆ ಮುಂದಾದರೆ ಕೆಲವರು ಅದರ ವಿರುದ್ಧ ಹೋರಾಡುತ್ತಿದ್ದಾರೆ. ಸಂಕಷ್ಟದಲ್ಲಿದ್ದವರನ್ನು ರಕ್ಷಿಸುವುದು ಸರಿ ಅಲ್ಲವೇ ಎಂದು ಪ್ರಶ್ನಿಸಿದರು.
ಇತ್ತಿಚಿನ ದಿನಗಳಲ್ಲಿ ಧರ್ಮದ ಆಧಾರಾದ ಮೇಲೆ ದಬ್ಬಾಳಿಕೆಗೆ ಗುರಿಯಾದವರನ್ನು ರಕ್ಷಿಸಲು ನಾವು ಕಾನೂನು ತಂದಿದ್ದೇವೆ. ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಅಂತವರನ್ನು ರಕ್ಷಿಸುವುದು ನಮ್ಮ ಕರ್ತವ್ಯ. ಆದರೆ ಕೆಲವರು ಸಂಸತ್ ನಿರ್ಣಯದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ವಾಗ್ದಾಳಿ ಮಾಡಿದರು.
ಕಾಂಗ್ರೆಸ್ ಪಕ್ಷದವರು ಸಂಸತ್ ನಿರ್ಣಗಳ ವಿರುದ್ಧ ದೇಶದಲ್ಲಿ ಹೋರಾಟ, ಪ್ರತಿಭಟನೆಗಳನ್ನು ಮಾಡುವ ಬದಲು ಪಾಕಿಸ್ತಾನದಲ್ಲಿ ದಬ್ಬಾಳಿಕೆ ಮಾಡುತ್ತಿರುವವರ ವಿರುದ್ಧ ಹೋರಾಡಿ. ಪಾಕ್ ನ 70 ವರ್ಷಾಗಳ ಕರಾಳ ಕಾರ್ಯದ ವಿರುದ್ಧ ಹೋರಾಡಿ. ವಿಪಕ್ಷಗಳು ದೇಶದ ಜನರ ದಾರಿಯನ್ನು ತಪ್ಪಿಸುವ ಕಾರ್ಯ ಮಾಡುತ್ತ ಪ್ರತಿಭಟನೆಗಳಿಗೆ ಪ್ರಚೋದನೆ ನೀಡುವ ಕೆಲಸ ಮಾಡುತ್ತ ಬರುತ್ತಿವೆ ಅದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಭಾರತದೇಶದಲ್ಲಿ ಪ್ರತಿಯೊಬ್ಬ ವ್ಯಕ್ತಿಯ ಜೀವನಮಟ್ಟವನ್ನು ಅಭಿವೃದ್ಧಿ ಪಡಿಸುವತ್ತ ನಮ್ಮ ಸರ್ಕಾರ ಕೆಲಸಮಾಡುತ್ತಿದೆ.ಅಲ್ಲದೆ ದೇಶದಲ್ಲಿ ಆರೋಗ್ಯ ವಿಮೆ, ಗ್ಯಾಸ್ ಸಂಪರ್ಕ, ಮನೆ, ವಿದ್ಯುತ್ ಸಂಪರ್ಕ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಬಡವರಿಗೆ ನೀಡುವುದು ನಮ್ಮ ಸರ್ಕಾರದ ಕೆಲಸವಾಗಿದೆ. ಇದರಲ್ಲಿ ಜನರು ಬದಲಾವಣೆಗಾಗಿ ನನಗೆ ಆಶೀರ್ವಾದಿಸಿದ್ದಾರೆ. ದೇಶದಲ್ಲಿನ ಬಡತನವನ್ನು ನಿರ್ಮೂಲನೆ ಮಾಡೋನ. ಭಯೋತ್ಪಾದನೆ ವಿರುದ್ಧ ಭಾರತದ ನೀತಿಯಲ್ಲಿ ಬದಲಾವಣೆಯಾಗಿದೆ ಎಂಬುದಕ್ಕೆ ಜಮ್ಮು-ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಸಾಕ್ಷಿಯಾಗಿದೆ. ರಾಮ ಮಂದಿರ ನಿರ್ಮಿಸುವುದಕ್ಕೆ ಒಳ್ಳೆಯ ವಾತಾವರಣ ನಿರ್ಮಾಣವಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷದವರು ಹಾಗೂ ಅವರ ಸಹಚರರು ಸಂವಿಧಾನಾದ ವಿರುದ್ಧವಾಗಿದ್ದಾರೆ.
























